ಸಂಡೂರು/ ಬಳ್ಳಾರಿ /ವರದಿ : ಕೆ ಮಹಮ್ಮದ್ ಖಾಸೀಂ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಸಂಡೂರು ಪ್ರಾಥಮಿಕ ಸಮಿತಿಯ ಸದಸ್ಯರಾಗಿದ್ದ ಹಾಗೂ ಬಂಡ್ರಿ-ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಇಬಿ ಲೈನ್ಮನ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಮಣ್ಣ ಚಲುವಾದಿ ಅವರು ವಿದ್ಯುತ್ ಅವಘಡದಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಬಂಡ್ರಿ ಸಮೀಪದ ಮೊರಾರ್ಜಿ ಶಾಲೆ ಬಳಿ ನಡೆದಿದೆ.
ಮಾಹಿತಿಯ ಪ್ರಕಾರ, ಇಂದು ಬೆಳಗಿನ ಜಾವ ವಿದ್ಯುತ್ ದುರಸ್ತಿ ಕಾರ್ಯ ನಿರ್ವಹಿಸುವ ವೇಳೆ ರಾಮಣ್ಣ ಚಲುವಾದಿ ಅವರು ವಿದ್ಯುತ್ ಕಂಬ ಹತ್ತಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಅವಘಡ ಸಂಭವಿಸಿ, ಅವರು ಕಂಬದ ಮೇಲ್ಭಾಗದಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡರು. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದರೂ, ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತ ರಾಮಣ್ಣ ಚಲುವಾದಿ ಅವರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಸಂಡೂರು ಪ್ರಾಥಮಿಕ ಸಮಿತಿಯ ಸದಸ್ಯರಾಗಿದ್ದು, ತಮ್ಮ ಕರ್ತವ್ಯನಿಷ್ಠೆ, ಸರಳತೆ ಹಾಗೂ ಜನಸ್ನೇಹಿ ಸ್ವಭಾವದಿಂದ ಬಂಡ್ರಿ-ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ ಹಗಲು-ರಾತ್ರಿ ಎನ್ನದೆ ಸೇವೆ ಸಲ್ಲಿಸುತ್ತಿದ್ದ ಅವರು ಜನರ ಅಚ್ಚುಮೆಚ್ಚಿನ ನೌಕರರಾಗಿದ್ದರು.
ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ತೀವ್ರ ದುಃಖ ವ್ಯಕ್ತಪಡಿಸಿದ್ದು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.
“ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ” ಎಂದು ಸಾರ್ವಜನಿಕರು ಮತ್ತು ಸಹೋದ್ಯೋಗಿಗಳು ಪ್ರಾರ್ಥಿಸಿದ್ದಾರೆ.
ವಿದ್ಯುತ್ ಕಂಬದಿಂದ ಬಿದ್ದು ಕೆಇಬಿ ಲೈನ್ಮನ್ ದುರ್ಮರಣ
ಸಂಡೂರಿನ ಜನಪ್ರಿಯ ನೌಕರ ರಾಮಣ್ಣ ಚಲುವಾದಿ ನಿಧನಕ್ಕೆ ವ್ಯಾಪಕ ಸಂತಾಪ
ವರದಿ : ಕೆ ಮಹಮ್ಮದ್ ಖಾಸೀಂ
ಸಂಡೂರು/ ಬಳ್ಳಾರಿ :
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಸಂಡೂರು ಪ್ರಾಥಮಿಕ ಸಮಿತಿಯ ಸದಸ್ಯರಾಗಿದ್ದ ಹಾಗೂ ಬಂಡ್ರಿ-ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಇಬಿ ಲೈನ್ಮನ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಮಣ್ಣ ಚಲುವಾದಿ ಅವರು ವಿದ್ಯುತ್ ಅವಘಡದಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಬಂಡ್ರಿ ಸಮೀಪದ ಮೊರಾರ್ಜಿ ಶಾಲೆ ಬಳಿ ನಡೆದಿದೆ.
ಮಾಹಿತಿಯ ಪ್ರಕಾರ, ಇಂದು ಬೆಳಗಿನ ಜಾವ ವಿದ್ಯುತ್ ದುರಸ್ತಿ ಕಾರ್ಯ ನಿರ್ವಹಿಸುವ ವೇಳೆ ರಾಮಣ್ಣ ಚಲುವಾದಿ ಅವರು ವಿದ್ಯುತ್ ಕಂಬ ಹತ್ತಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಅವಘಡ ಸಂಭವಿಸಿ, ಅವರು ಕಂಬದ ಮೇಲ್ಭಾಗದಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡರು. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದರೂ, ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತ ರಾಮಣ್ಣ ಚಲುವಾದಿ ಅವರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಸಂಡೂರು ಪ್ರಾಥಮಿಕ ಸಮಿತಿಯ ಸದಸ್ಯರಾಗಿದ್ದು, ತಮ್ಮ ಕರ್ತವ್ಯನಿಷ್ಠೆ, ಸರಳತೆ ಹಾಗೂ ಜನಸ್ನೇಹಿ ಸ್ವಭಾವದಿಂದ ಬಂಡ್ರಿ-ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ ಹಗಲು-ರಾತ್ರಿ ಎನ್ನದೆ ಸೇವೆ ಸಲ್ಲಿಸುತ್ತಿದ್ದ ಅವರು ಜನರ ಅಚ್ಚುಮೆಚ್ಚಿನ ನೌಕರರಾಗಿದ್ದರು.
ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ತೀವ್ರ ದುಃಖ ವ್ಯಕ್ತಪಡಿಸಿದ್ದು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.
“ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ” ಎಂದು ಸಾರ್ವಜನಿಕರು ಮತ್ತು ಸಹೋದ್ಯೋಗಿಗಳು ಪ್ರಾರ್ಥಿಸಿದ್ದಾರೆ.
